ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಧುಸೂಧನ್ ಅವರು ನೀಡಿದ ದೂರಿನ ಮೇರೆಗೆ ರಿಯಲ್ ಸ್ಟಾರ್ ಉಪೇಂದ್ರ ಅವರ ವಿರುದ್ಧ ಅಟ್ರಾಸಿಟಿ ಕೇಸು ದಾಖ...
ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಧುಸೂಧನ್ ಅವರು ನೀಡಿದ ದೂರಿನ ಮೇರೆಗೆ ರಿಯಲ್ ಸ್ಟಾರ್ ಉಪೇಂದ್ರ ಅವರ ವಿರುದ್ಧ ಅಟ್ರಾಸಿಟಿ ಕೇಸು ದಾಖಲಾಗಿದೆ.
ಉಪೇಂದ್ರ ನೀಡಿದ ಹೇಳಿಕೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಅವರ ವಿರುದ್ಧ ಪ್ರತಿಭಟನೆ ಕೂಡ ನಡೆಸಲಾಗಿದೆ. ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ದೂರು ಕೂಡ ದಾಖಲಿಸಿವೆ. ಉಪೇಂದ್ರ ಅವರನ್ನು ಬಂಧಿಸಬೇಕೆಂಬ ಒತ್ತಾಯ ಕೂಡ ಕೇಳಿ ಬಂದಿದೆ.
ಉಪೇಂದ್ರ ತಾವು ನೀಡಿದ ಹೇಳಿಕೆಗಾಗಿ ಕ್ಷಮೆ ಕೇಳಿ ವಿಡಿಯೋ ಡಿಲಿಟ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಉಪೇಂದ್ರ ಪರ ಮತ್ತು ವಿರೋಧವಾಗಿ ಅಭಿಪ್ರಾಯಗಳು ಕೇಳಿ ಬಂದಿವೆ. ಸೆಲೆಬ್ರಿಟಿಯಾಗಿರುವ ನಟ ಉಪೇಂದ್ರ ರಾಜಕೀಯ ಪಕ್ಷದ ಮುಖ್ಯಸ್ಥರೂ ಆಗಿದ್ದಾರೆ. ಅವರು ನೀಡಿದ ಹೇಳಿಕೆ ಆಕ್ಷೇಪಾರ್ಹವಾಗಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೆಲವರು ಒತ್ತಾಯಿಸಿದ್ದು, ಅವರು ಈಗಾಗಲೇ ವಿಡಿಯೋ ಡಿಲಿಟ್ ಮಾಡಿ ಕ್ಷಮೆ ಕೇಳಿರುವುದರಿಂದ ಇದನ್ನು ಇಲ್ಲಿಗೆ ನಿಲ್ಲಿಸುವುದು ಒಳಿತು ಎಂದು ಮತ್ತೆ ಕೆಲವರು ಹೇಳಿದ್ದಾರೆ.